Green Sunday #498
Adamya Green #498 498ನೇ ಹಸಿರು ಭಾನುವಾರದ ಸಂಭ್ರಮ! 🌱“ಮನೆಗೊಂದು ಮರ, ಊರಿಗೊಂದು ವನ” ಎಂಬ ಧ್ಯೇಯವಾಕ್ಯದೊಂದಿಗೆ 498ನೇ ಹಸಿರು ಭಾನುವಾರ ಶ್ರೀ ಜಯಚಾಮರಾಜೇಂದ್ರ ಪಾಲಿಟೆಕ್ನಿಕ್ ಕಾಲೇಜು (ಎಸ್.ಜೆ.ಪಿ), ಬೆಂಗಳೂರು ಇಲ್ಲಿ ಯಶಸ್ವಿಯಾಗಿ ನೆರವೇರಿತು.ಈ ಪವಿತ್ರ ಕಾರ್ಯದಲ್ಲಿ ಅದಮ್ಯ ಚೇತನದ ಅಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತಕುಮಾರ್, ಹಸಿರು ಯೋಧರು, ಕಾಲೇಜು ವಿದ್ಯಾರ್ಥಿಗಳು, ಸಿಬ್ಬಂದಿ ಹಾಗೂ ಹಲವಾರು ಪರಿಸರ ಪ್ರೇಮಿಗಳು ಪಾಲ್ಗೊಂಡು ಪರಿಸರ ಸಂರಕ್ಷಣೆಗೆ ಪ್ರತಿಜ್ಞೆ ತೆಗೆದುಕೊಂಡರು.









